Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಡಿಸೆಂಬರ್ 09 ರಂದು ರೈತ ನಾಯಕ ಟಿ.ನುಲೇನೂರು ಎಂ.ಶಂಕರಪ್ಪ ನುಡಿನಮನ ಕಾರ್ಯಕ್ರಮ

05:24 PM Dec 07, 2023 IST | suddionenews
Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

Advertisement

 

 

Advertisement

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.06 : ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಜಿಲ್ಲಾ ನೀರಾವರಿ ಅನುಷ್ಟಾನ ಹೋರಾಟ ಸಮಿತಿ ವತಿಯಿಂದ ಹೋರಾಟಗಾರ ಟಿ.ನುಲೇನೂರು ಎಂ.ಶಂಕರಪ್ಪನವರಿಗೆ ಡಿ.9 ರಂದು ಬೆಳಿಗ್ಗೆ 11-30 ಕ್ಕೆ ತ.ರಾ.ಸು.ರಂಗಮಂದಿರದಲ್ಲಿ ನುಡಿ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ನುಡಿ ನಮನ ಉದ್ಗಾಟಿಸುವರು.

ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಕಾರ್ಯಾಧ್ಯಕ್ಷ ಬಿ.ಎ.ಲಿಂಗಾರೆಡ್ಡಿ ಅಧ್ಯಕ್ಷತೆ ವಹಿಸಲಿದ್ದಾರೆ.
ಕಮಲಮ್ಮ ನುಲೇನೂರು ಶಂಕರಪ್ಪ ಉಪಸ್ಥಿತರಿರುವರು.

ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಕಿಸಾನ್‍ಸಭಾ ರಾಜ್ಯಾಧ್ಯಕ್ಷ ಸಿದ್ದನಗೌಡ ಪಾಟೀಲ, ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಹೆಚ್.ಆರ್.ಬಸವರಾಜಪ್ಪ, ಸರ್ವೋದಯ ಕರ್ನಾಟಕ ಅಧ್ಯಕ್ಷ ಚಾಮರಸ ಪಾಟೀಲ, ನಗರಸಭೆ ಮಾಜಿ ಅಧ್ಯಕ್ಷ ಬಿ.ಕಾಂತರಾಜ ಇವರುಗಳು ನುಡಿ ನಮನದಲ್ಲಿ ಭಾಗವಹಿಸಲಿದ್ದಾರೆ.

ಪ್ರಗತಿಪರ ಚಿಂತಕ ಜೆ.ಯಾದವರೆಡ್ಡಿ ಪ್ರಾಸ್ತಾವಿಕ ನುಡಿಗಳನ್ನಾಡುವರು.
ಟಿ.ನುಲೇನೂರು ಎಂ.ಶಂಕರಪ್ಪನವರ ಅಭಿಮಾನಿಗಳು, ಹೋರಾಟ ಮನೋಭಾವದವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ವಿನಂತಿಸಿದೆ.

Advertisement
Tags :
chitradurgaFarmer leader T. Nulenur M. Shankarappaಚಿತ್ರದುರ್ಗಡಿಸೆಂಬರ್ 09ನುಡಿನಮನ ಕಾರ್ಯಕ್ರಮರೈತ ನಾಯಕ ಟಿ.ನುಲೇನೂರು ಎಂ.ಶಂಕರಪ್ಪ
Advertisement
Next Article