Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ದಾವಣಗೆರೆಯಲ್ಲಿ ಟಿಕೆಟ್ ಗಾಗಿ ಫೈಟ್ : ಶಾಮನೂರು ಶಿವಶಂಕರಪ್ಪ ಅಥವಾ ಹೊಸಬರಿಗೆ ಸಿಗಲಿದೆಯಾ ಟಿಕೆಟ್

05:34 PM Mar 07, 2024 IST | suddionenews
Advertisement

ದಾವಣಗೆರೆ: ಲೋಕಸಭಾ ಚುನಾವಣೆ ಸನಿಹವಾಗುತ್ತಿದ್ದಂತೆ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯೂ ಬೆಳೆಯುತ್ತಿದೆ. ದಾವಣಗೆರೆಯಲ್ಲೂ ಕಾಂಗ್ರೆಸ್ ಆಕಾಂಕ್ಷಿಗಳ ಪಟ್ಟಿಯೂ ದೊಡ್ಡದಾಗುತ್ತಿದೆ. ಕಾಂಗ್ರೆಸ್ ನಲ್ಲಿ ಸಚುವ ಎಸ್ ಎಸ್ ಮಲ್ಲಿಕಾರ್ಜುನ್ ಪತ್ನಿ ಪ್ರಭಾ ಮಲ್ಲಿಕಾರ್ಜುನ್ ಹಾಗೂ ಇನ್ ಸೈಟ್ಸ್ ಐಎಎಸ್ ಕೋಚಿಂಗ್ ಸೆಂಟರ್ ನ ಸಂಸ್ಥಾಪಕ ವಿನಯ್ ಕುಮಾರ್ ಅವರ ಹೆಸರು ಹೆಚ್ಚು ಪ್ರಚಲಿತವಾಗಿದೆ. ಅಷ್ಟೇ ಅಲ್ಲ ಕಾಂಗ್ರೆಸ್ ಯುವ ನಾಯಕ ನಿಖಿಲ್ ಕೊಂಡಜ್ಜಿ ಹೆಸರು ತೆರೆಮರೆಯಲ್ಲಿ ಓಡಾಡುತ್ತಿದೆ.

Advertisement

 

ಇತ್ತ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ವಿನಯ್ ಕುಮಾರ್, ಈಗಾಗಲೇ ಪ್ರಚಾರ ಕಾರ್ಯದಲ್ಲೂ ತೊಡಗಿಕೊಂಡಿದ್ದಾರೆ. ಕುರುಬ ಸಮುದಾಯದವರೇ ಆಗಿರುವ ವಿನಯ್ ಕುಮಾರ್ ಅವರು, ಟಿಕೆಟ್ ಸಿಗುವ ವಿಶ್ವಾಸದಲ್ಲಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಜೊತೆಗೂ ಈಗಾಗಲೇ ಟಿಕೆಟ್ ವಿಚಾರವಾಗಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಹೀಗಾಗಿ ದಾವಣಗೆರೆಯಾದ್ಯಂತ ಪ್ರಚಾರದಲ್ಲಿ ತೊಡಗಿದ್ದಾರೆ.

Advertisement

ಇನ್ನು ಶಾಸಕ ಶಾಮನೂರು ಶಿವಶಂಕರಪ್ಪ ಅವರ ಕುಟುಂಬಸ್ಥರಲ್ಲಿಯೂ ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಶಿವಶಂಕರಪ್ಪ ಅವರ ಸೊಸೆ ಡಾ. ಪ್ರಭಾ ಮಲ್ಲಿಕಾರ್ಜುನ ಅವರು ಈಗಾಗಲೇ ಕ್ಷೇತ್ರದಲ್ಲಿ ಸಂಚಾರ ಕಾರ್ಯ ಆರಂಭಿಸಿದ್ದಾರೆ. ಕುಟುಂಬಸ್ಥರಿಂದ ಈಗಾಗಲೇ ಟಿಕೆಟ್ ಗಾಗಿ ಲಾಭಿ ನಡೆಯುತ್ತಿದೆ. ಈ ಸಂಬಂಧ ಡಾ.ಪ್ರಭಾ ಮಲ್ಲಿಕಾರ್ಜುನ ಮಾತನಾಡಿ, ಟಿಕೆಟ್ ಗೆ ತಲೆಕೆಡಿಸಿಕೊಂಡಿಲ್ಲ. ಮನೆ ಮನೆಗೆ ಆರೋಗ್ಯ ಸೇವೆ ನೀಡಬೇಕು ಎಂಬ ಕಲ್ಪನೆಯೊಂದಿಗೆ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜನೆ ಮಾಡಪಾಗುತ್ತಿದೆ. ಲೋಕಸಭಾ ಚುನಾವಣೆಯ ಅಜೆಂಡಾ ಇಟ್ಟುಕೊಂಡು ಈ ಕೆಲಸಗಳ‌ನ್ನು ಮಾಡುತ್ತಿಲ್ಲ ಎಂದಿದ್ದಾರೆ.

Advertisement
Tags :
davanagereShamnur shivashankarappaಟಿಕೆಟ್ ಗಾಗಿ ಫೈಟ್ದಾವಣಗೆರೆಶಾಮನೂರು ಶಿವಶಂಕರಪ್ಪ
Advertisement
Next Article