Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ನಾಳೆಯಿಂದ ಮೇ.17ರವರೆಗೂ ಎಲ್ಲಾ ಜಿಲ್ಲೆಗಳಲ್ಲೂ ಮಳೆಯ ಅಬ್ಬರ..!

07:46 PM May 09, 2024 IST | suddionenews
Advertisement

ಕಳೆದ ಮೂರ್ನಾಲ್ಕು ದಿನದಿಂದ ವರುಣರಾಯನ ದರ್ಶನವಾಗುತ್ತಿದೆ. ಆದರೂ ಕೆಲವೊಂದು ಕಡೆ ಬಿಸಿ ಗಾಳಿಯ ಅನುಭವ ಮಾತ್ರ ಕಡಿಮೆಯಾಗಿಲ್ಲ. ಇಂದು ಸಂಜೆ ವೇಳೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆಯಾಗಿದೆ. ಇದರಿಂದ ವಾಹನ ಸವಾರರು, ಕೆಲಸಕ್ಕೆ ಹೋದ ಜನ ಪರದಾಡುವಂತೆ ಆಗಿದೆ. ನಾಳೆಯಿಂದ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

ಈಗಾಗಲೇ ದಕ್ಷಿಣ ಒಳನಾಡಿನಲ್ಲಿ ವಾಡಿಕೆಯಂತೆ ಮಳೆ ಶುರುವಾಗಿದೆ. ಮೇ 11 ರಿಂದ 17ರವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಇಂದು ಸಹ ಸಾಧಾರಣ ಮಳೆ ಆಗುವ ನಿರೀಕ್ಷೆ ಇದೆ. ಗಾಳಿ, ಗುಡುಗು ಸಹಿತ ಮಳೆ ಬೀಳಲಿದೆ ಎಂದು ಎಚ್ಚರಿಕೆ ಹವಾಮಾನ ‌ಇಲಾಖೆ ಎಚ್ಚರಿಕೆ ನೀಡಿದೆ.

 

Advertisement

ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ. ಈಗಾಗಲೇ ತುಮಕೂರು, ಶಿವಮೊಗ್ಗ, ಯಾದಗಿರಿ, ಬಳ್ಳಾರಿ, ಮೈಸೂರು, ಮಂಡ್ಯ, ಚಾಮರಾಜನಗರದಲ್ಲಿ ಭಾರೀ ಮಳೆಯಾಗಿದ್ದು, ಮುಂದಿನ ಕೆಲವು ಗಂಟೆಗಳಲ್ಲಿ ಬೆಂಗಳೂರು, ಮೈಸೂರು, ರಾಮನಗರ, ಹಾಸನ, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ, ಉಡುಪಿ ಘಾಟ್​​ಗಳಲ್ಲಿ ಹಾಗೂ ಚಿಕ್ಕಮಗಳೂರಲ್ಲಿ ಮಳೆಯಾಗಲಿದೆ ಎಂದು ಎಚ್ಚರಿಕೆ ಕೊಟ್ಟಿದೆ.

Advertisement
Tags :
bengaluruchitradurgasuddionesuddione newsಚಿತ್ರದುರ್ಗಬೆಂಗಳೂರುಮಳೆಯ ಅಬ್ಬರಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article