For the best experience, open
https://m.suddione.com
on your mobile browser.
Advertisement

ಹಿರಿಯೂರು | ಗ್ರಾಮ ಲೆಕ್ಕಾಧಿಕಾರಿ ಅಮಾನತು : ಜಿಲ್ಲಾಧಿಕಾರಿ ಆದೇಶ...!

07:56 PM Oct 01, 2024 IST | suddionenews
ಹಿರಿಯೂರು   ಗ್ರಾಮ ಲೆಕ್ಕಾಧಿಕಾರಿ ಅಮಾನತು   ಜಿಲ್ಲಾಧಿಕಾರಿ ಆದೇಶ
Advertisement

ಸುದ್ದಿಒನ್, ಹಿರಿಯೂರು, ಅಕ್ಟೋಬರ್. 01 : ತಾಲ್ಲೂಕಿನ ಜವಗೊಂಡನಹಳ್ಳಿ ವ್ಯಾಪ್ತಿಯ ಕೆ.ಆರ್. ಹಳ್ಳಿಯ ವೃತ್ತದ ಗ್ರಾಮ ಲೆಕ್ಕಾಧಿಕಾರಿ ದಾಸೇಗೌಡ ಜೆ. ಎಂ. ಅವರನ್ನು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಮಂಗಳವಾರ ಅಮಾನತುಗೊಳಿಸಿದ್ದಾರೆ.

Advertisement
Advertisement

ಸಾರ್ವಜನಿಕರಿಂದ ಹಣ ಪಡೆಯುತ್ತಿರುವ ದೃಶ್ಯ ಸೆರೆಯಾಗಿರುವ ವಿಡೀಯೋ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದರಿಂದ ಲಂಚ ಸ್ವೀಕರಿಸುತ್ತಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವುದರಿಂದ ಕರ್ನಾಟಕ ನಾಗರೀಕ ಸೇವಾ (ನಡತೆ) ನಿಯಮಾವಳಿ 1966 ಹಾಗೂ ತಿದ್ದುಪಡಿ ನಿಯಮಗಳು 2021 ರ ನಿಯಮ 3(i) (ii)(iii) ಕ್ಕೆ ವಿರುದ್ಧವಾಗಿರುವುದರಿಂದ ಗ್ರಾಮ ಲೆಕ್ಕಾಧಿಕಾರಿ ದಾಸೇಗೌಡ ಅವರನ್ನು ಅಮಾನತುಗೊಳಿಸಲಾಗಿದೆ ಎಂದು
ಆದೇಶದಲ್ಲಿ ತಿಳಿಸಿದ್ದಾರೆ.

Advertisement
Tags :
Advertisement