Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಹುಬ್ಬಳ್ಳಿ - ಧಾರಾವಾಡ ಪೊಲೀಸ್ ಆಯುಕ್ತರ ಬದಲಾವಣೆ : ರೇಣುಕಾ ಜಾಗಕ್ಕೆ ಬಂದ್ರು ಶಶಿಕುಮಾರ್

11:28 AM Jul 03, 2024 IST | suddionenews
Advertisement

ಹುಬ್ಬಳ್ಳಿ: ಕಳೆದ ಕೆಲವು ದಿನಗಳ ಹಿಂದೆ ನೇಹಾ ಕೊಲೆಯಿಂದಾಗಿ ಇಡೀ ಹುಬ್ಬಳ್ಳಿ ಮಂದಿ ಬೆಚ್ಚಿ ಬಿದ್ದರು. ಅದಾದ ಕೆಲವೇ ದಿನಗಳ ಮತ್ತೊಬ್ಬ ವಿದ್ಯಾರ್ಥಿಯನ್ನು ಅದೇ ಥರ ಕೊಲ್ಲಲಾಗಿತ್ತು. ಮೂರು ತಿಂಗಳ ಅವಧಿಯಲ್ಲಿ ಮೂರು ಕೊಲೆಗಳಾಗಿತ್ತು. ಅಲ್ಲಿನ ಕಾನೂನು ವ್ಯವಸ್ಥೆ ಸರಿ ಇಲ್ಲ ಎಂದೇ ಹುಬ್ಬಳ್ಳಿ ಜನತೆ ಆರೋಪ ಮಾಡಿದ್ದರು. ಈ ಬೆನ್ನಲ್ಲೇ ಇದೀಗ ಪೊಲೀಸ್ ಆಯುಕ್ತರ ಬದಲಾವಣೆಯಾಗಿದೆ. ಹೊಸದಾಗಿ ಐಪಿಎಸ್ ಅಧಿಕಾರಿ ಶಶಿಕುಮಾರ್ ಅವರನ್ನು ನೇಮಕ ಮಾಡಲಾಗಿದೆ.

Advertisement

 

ಹುಬ್ಬಳ್ಳಿ - ಧಾರವಾಡ ಪೊಲೀಸ್ ಆಯುಜ್ತರಾಗಿ ರೇಣುಕಾ ಸುಕುಮಾರ್ ಅವರು ಕಾರ್ಯ ನಿರ್ವಹಿಸುತ್ತಾ ಇದ್ದರು. ಇದೀಗ ದಿಢೀರನೇ ಅವರ ವರ್ಗಾವಣೆಯಾಗಿದೆ. ಪೊಲೀಸ್ ಆಯುಜ್ತರಾಗಿ ಶಶಿಕುಮಾರ್ ಚಾರ್ಜ್ ತೆಗೆದುಕೊಳ್ಳುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ನೇಹಾ ಹೀರೇಮಠ, ಅಂಜಲಿ ಅಂಬಿಗೇರ ಕೊಲೆಯಾಗಿತ್ತು. ಕೊಲೆಯಾದ ನಂತರ ಹಲವು ಒ್ರಕರಣಗಳು ಬೆಳಕಿಗೆ ಬಂದವು. ಇದನ್ನು ವಿರೋಧಿಸಿ, ಸಂಘ ಸಂಸ್ಥೆಗಳು, ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

Advertisement

ಇನ್ನು ಬೆಂಗಳೂರಿನಲ್ಲಿ ರಾಮೇಶ್ವರಂ ಕೆಫೆ ಕೂಡ ಎಲ್ಲರಿಗೂ ಆತಂಕ ಉಂಟು ಮಾಡಿದ್ದಂತ ಕೇಸ್ ಆಗಿತ್ತು. ಈ ಬಾಂಬ್ ಬ್ಲಾಸ್ಟ್ ಗೂ ಹುಬ್ಬಳ್ಳಿಯ ನಂಟು ಇದ್ದದ್ದು ಬೆಳಕಿಗೆ ಬಂದಿತ್ತು. ಎಸ್ಐಟಿ ಅಧಿಕಾರಿಗಳು ಈ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿದ್ದಾಗ ಏಕಕಾಲದಲ್ಲಿ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದರು.

ಇಷ್ಟೆಲ್ಲಾ ಅಪರಾಧ ಪ್ರಕರಣಗಳು ಬೆಳಕಿಗೆ ಬಂದ ಬೆನ್ನಲ್ಲೇ ಇದೀಗ ಪೊಲೀಸ್ ಆಯುಕ್ತರ ಬದಲಾವಣೆಯಾಗಿದ್ದು, ಮಂಗಳೂರ, ಬೆಂಗಳೂರಿನಲ್ಲಿ ಹೆಸರು ಮಾಡಿರುವ ಶಶಿಕುಮಾರ್ ಅವರನ್ನು ನೇಮಕ ಮಾಡಿದ್ದಾರೆ. ಮೊದಲಿದ್ದ ರೇಣುಕಾ ಸುಕುಮಾರ್ ಅವರನ್ನು ಬೆಂಗಳೂರಿನ ಕೇಂದ್ರ ಕಚೇರಿಗೆ ವರ್ಗಾವಣೆ ಮಾಡಿದ್ದಾರೆ.

Advertisement
Tags :
hubli dharwadpolice commissionerRenukaSasikumarಪೊಲೀಸ್ ಆಯುಕ್ತರರೇಣುಕಾಶಶಿಕುಮಾರ್ಹುಬ್ಬಳ್ಳಿ - ಧಾರಾವಾಡ
Advertisement
Next Article