Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ತಂದೆ-ತಾಯಿಯ ಆರೋಗ್ಯದಲ್ಲಿ ಏನಾದರೂ ಏರುಪೇರಾದರೆ : ಕುಮಾರಸ್ವಾಮಿ ಆಕ್ರೋಶ

04:03 PM May 07, 2024 IST | suddionenews
Advertisement

 

Advertisement

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಇಂದು ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಸಿದ್ದರಾಮಯ್ಯ ನವರೇ ದೇವೇಗೌಡರಿಂದ ನೀವೂ ಬೆಳೆದಿದ್ದೀರಿ. ಅವರು ಏನಂತಾ ನನಗಿಂತ ಚೆನ್ನಾಗಿ ನೀವೂ ತಿಳಿದುಕೊಂಡಿದ್ದೀರಿ. ಅವರ ಬಗ್ಗೆ ಲಘುವಾಗಿ ಮಾತನಾಡಬೇಡಿ ಎಂದಿದ್ದಾರೆ.

ನಮ್ಮ ತಂದೆ ದೇವೇಗೌಡರಿಗೆ 92 ವರ್ಷ ವಯಸ್ಸಾಗಿದೆ. ತಾಯಿಗೆ 89 ವರ್ಷ. ಅವರು ಯಾವ ರೀತಿ ಬದುಕಿದ್ದಾರೆಂದು ಕಣ್ಣಾರೆ ಕಂಡಿದ್ದೇನೆ. ಅವರ ಆರೋಗ್ಯದಲ್ಲಿ ಏನಾದರೂ ಏರುಪೇರಾದರೆ, ತಂದೆ ತಾಯಿಯನ್ನು ಕಳೆದುಕೊಳ್ಳುತ್ತೇವೆ ಎನ್ನುವ ನೋವಿನಲ್ಲಿ ಅವರಿಗೆ ಆತ್ಮಸ್ಥೈರ್ಯ ತುಂಬುವುದಕ್ಕೆ ಎರಡು ದಿನ ಮನೆಗೆ ಹೋಗಿದ್ದೆ. ಆದರೆ ಹೆಚ್ಡಿಕೆ, ರೇವಣ್ಣ ಕುಟುಂಬದ ಸಂಘಟಿತ ಪಾಪದ ಕೃತ್ಯ ಎಂದು ಹೇಳಿಕೆ ಕೊಟ್ಟ ಮುಖ್ಯಮಂತ್ರಿ ಯಾವ ಎಸ್ಐಟಿ ತನಿಖೆ ನಡೆಸುತ್ತಾರೆ ಎಂದು ಪ್ರಶ್ನೆ ಮಾಡಿದ್ದಾರೆ.

Advertisement

ಸಿದ್ದರಾಮಯ್ಯ ಅವರಿಗೆ ತಂದೆ ತಾಯಿಯ ಸಂಬಂಧದ ಆತ್ಮೀಯತೆ ಹಾಗೂ ಬಾಂಧವ್ಯ ಇಲ್ಲದೆ ಇರಬಹುದು. ಆದರೆ ನಾವೂ ಆ ತರ ಬದುಕಿಲ್ಲ‌. ನಮಗೆ ನಮ್ಮ ತಂದೆ ತಾಯಿಯ ಆರೋಗ್ಯವೇ ಮುಖ್ಯ. ನಾನು ಹೊರಗಡೆ ರಾಜಕೀಯ ಪ್ರಚಾರಕ್ಕೆ ಹೋದರು, ಸಭೆ ಸಮಾರಂಭಗಳಿಗೆ ಹೋದರು ಕೂಡ ರಾತ್ರಿ ಮನೆಗೆ ವಾಪಾಸ್ ಹೋಗಿ ತಂದೆ ತಾಯಿಗೆ ಧೈರ್ಯ ಹೇಳಿ ಹೋಗುತ್ತಿದ್ದೆ. ದೇವೇಗೌಡರ ಮನೆ ಎಂದು ಹೇಳುತ್ತೀರಿ. ಆದರೆ ದೇವೇಗೌಡರಿಗೆ ಸ್ವಂತ ಮನೆಯಿಲ್ಲ. ಮಗಳ ಮನೆಯಲ್ಲಿ ಇದ್ದಾರೆ. ರೇವಣ್ಣ ಕಿಡ್ನ್ಯಾಪ್ ಮಾಡಿಸಿದ್ದಾರಾ..? ಪಾಪ ಅವರನ್ನು ತೆಗೆದುಕೊಂಡು‌ ಹೋಗಿ ಒಳಗೆ ಕೂರಿಸಿದ್ದೀರಿ. ಅನ್ಯಾಯ ಆದ ಹೆಣ್ಣು ಮಕ್ಕಳಿಗೂ ನ್ಯಾಯ ಸಿಗಬೇಕು ಅಂದ್ರೆ ಈ ಪ್ರಕರಣವನ್ನು ಸಿಬಿಐಗೆ ನೀಡಿ ಎಂದು ಒತ್ತಾಯಿಸಿದ್ದಾರೆ.

Advertisement
Tags :
bengaluruchangechitradurgaKumaraswamyoutragedparentssuddionesuddione newsಆಕ್ರೋಶಆರೋಗ್ಯಏರುಪೇರುಕುಮಾರಸ್ವಾಮಿಚಿತ್ರದುರ್ಗತಂದ-ತಾಯಿಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article