For the best experience, open
https://m.suddione.com
on your mobile browser.
Advertisement

ರಾಜ್ಯ ಬಿಜೆಪಿ ವಕ್ತಾರರಾಗಿ ಕೆ. ಎಸ್. ನವೀನ್ ನೇಮಕ

05:07 PM Jan 04, 2024 IST | suddionenews
ರಾಜ್ಯ ಬಿಜೆಪಿ ವಕ್ತಾರರಾಗಿ ಕೆ  ಎಸ್  ನವೀನ್ ನೇಮಕ
Advertisement

ಸುದ್ದಿಒನ್, ಚಿತ್ರದುರ್ಗ, ಜನವರಿ.04 : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಪಕ್ಷ ಸಂಘಟನಾ ಕಾರ್ಯವನ್ನು ಚುರುಕುಗೊಳಿಸಿದ್ದಾರೆ. ಇತ್ತೀಚೆಗಷ್ಟೇ ರಾಜ್ಯ ಬಿಜೆಪಿಯ ನೂತನ ಪದಾಧಿಕಾರಿಗಳನ್ನು ನೇಮಿಸಿದ್ದರು. ಇಂದು ಪಕ್ಷದ ಮುಖ್ಯ ವಕ್ತಾರರು ಹಾಗೂ ವಕ್ತಾರರನ್ನು ನೇಮಿಸಿ ಆದೇಶಿಸಿದ್ದಾರೆ. 

Advertisement

ಈ ಪಟ್ಟಿಯಲ್ಲಿ ಚಿತ್ರದುರ್ಗ - ದಾವಣಗೆರೆ ವಿಧಾನ ಪರಿಷತ್ ಸದಸ್ಯರಾದ ಕೆ ಎಸ್ ನವೀನ್ ಅವರು ರಾಜ್ಯ ಬಿಜೆಪಿ ವಕ್ತಾರರಾಗಿ ನೇಮಕಗೊಂಡಿದ್ದಾರೆ.

Advertisement

ನವೀನ್ ಅವರು ಈ ಹಿಂದೆ ಸಂಘ ಪಾರಿವಾರದ ಧರ್ಮ ಜಾಗರಣದಲ್ಲಿ ಸೇವೆ ಸಲ್ಲಿಸಿದ್ದು ನಂತರ ಬಿಜೆಪಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, ನಂತರ 2017 ರಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿ, ನಂತರ 2019 ಬಿಜೆಪಿ ರಾಜ್ಯ ಕಾರ್ಯದರ್ಶಿಗಳಾಗಿ, ತುಮಕೂರು ದಾವಣಗೆರೆ ಚಿತ್ರದುರ್ಗ ಜಿಲ್ಲೆಗಳ ಪ್ರಭಾರಿಯಾಗಿ, 2021 ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Advertisement

ವಿಧಾನ ಪರಿಷತ್‌ ಮಾಜಿ ಸದಸ್ಯ ಅಶ್ವತ್ಥನಾರಾಯಣ ಅವರನ್ನು ಮುಖ್ಯ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ. ಹರಿಪ್ರಕಾಶ್‌ ಕೋಣೆಮನೆ, ಛಲವಾದಿ ನಾರಾಯಣಸ್ವಾಮಿ, ಡಾ. ತೇಜಸ್ವಿನಿ ಗೌಡ, ಎಂ.ಜಿ. ಮಹೇಶ್‌, ಎಚ್.ಎನ್.‌ ಚಂದ್ರಶೇಖರ್‌, ಡಾ. ನರೇಂದ್ರ ರಂಗಪ್ಪ, ಕು. ಸುರಭಿ ಹೊದಿಗೆರೆ, ಅಶೋಕ್‌ ಕೆ.ಎಂ. ಗೌಡ, ಎಚ್.‌ ವೆಂಕಟೇಶ್‌ ದೊಡ್ಡೇರಿ ಅವರನ್ನು ಆಯ್ಕೆ ಮಾಡಿ ಆದೇಶವನ್ನು ಹೊರಡಿಸಲಾಗಿದೆ.

Advertisement
Advertisement

Advertisement
Tags :
Advertisement