Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಹತ್ತು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಲಿ : ಬಿಜೆಪಿ ಶಾಸಕರ ಮನದಾಳದ ಆಸೆ

06:08 PM Nov 30, 2023 IST | suddionenews
Advertisement

ರಾಯಚೂರು: ಬಿಜೆಪಿ ಶಾಸಕರೊಬ್ಬರು ಸಿದ್ದರಾಮಯ್ಯ ಅವರನ್ನು ಹಾಡಿ ಹೊಗಳಿದ್ದಾರೆ. ಇಂದು ಕನಕದಾಸರ ಜಯಂತೋತ್ಸವ ಸಮಾರಂಭದಲ್ಲಿ ಭಾಗಿಯಾಗಿದ್ದ ಬಿಜೆಪಿ ಶಾಸಕ ಡಾ.ಶಿವರಾಜ್ ಪಾಟೀಲ್ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿ ಎಂದು ಆಶಿಸಿದ್ದಾರೆ. ಅದರಲ್ಲೂ ಮುಂದಿನ ಇನ್ನು ಐದು ವರ್ಷಗಳ ಕಾಂಗ್ರೆಸ್ ಗೆಲ್ಲಲಿ, ಅವರೇ ಸಿಎಂ ಆಗಲಿ ಎಂದು ಹಾರೈಸಿದ್ದಾರೆ.

Advertisement

 

ಈ ಹಿಂದೆ ದೇವರಾಜು ಅರಸು ಅವರು ಪೂರ್ಣಾವಧಿ ಸಿಎಂ ಆಗಿದ್ದರು. ಅಲ್ಲದೇ ಎಂಟಯ ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದರು. ಈಗಾಗಲೇ ಸಿದ್ದರಾಮಯ್ಯ ಅವರು ಪೂರ್ಣಾವಧಿ ಸಿಎಂ ಆಗಿದ್ದಾರೆ. ಈ ಬಾರಿಯೂ ಸಿದ್ದರಾಮಯ್ಯ ಅವರು ಪೂರ್ಣಾವಧಿ ಸಿಎಂ ಆಗಿ ಮುಂದಜವರೆಯಲಿ. ಮುಂದಿನ ಹತ್ತು ವರ್ಷಗಳ ಸಿಎಂ ಆಗಿ ಸಿದ್ದರಾಮಯ್ಯ ಅವರು ಮುಂದುವರೆಯಲಿ ಎಂದೇ ಹರಸಿದ್ದಾರೆ.

Advertisement

ಕಾಂಗ್ರೆಸ್ ಪಕ್ಷದಲ್ಲಿಯೇ ಸಿಎಂ ವಿಚಾರಕ್ಕೆ ಸಾಕಷ್ಟು ಚರ್ಚೆಗಳು ಆಗಾಗ ಶುರುವಾಗುತ್ತವೆ. ಸಿದ್ದರಾಮಯ್ಯ ಬೆಂಬಲುಗರು, ಈ ಐದು ವರ್ಷದ ಅವಧಿಯಲ್ಲಿ ಸಿದ್ದರಾಮಯ್ಯ ಅವರೇ ಮುಂದುವರೆಯಲಿ ಎಂದು ಹೇಳಿದರೆ, ಡಿಕೆ ಶಿವಕುಮಾರ್ ಅವರ ಬೆಂಬಲಿಗರು ಡಿಕೆಶಿ ಆದಷ್ಟು ಬೇಗ ಸಿಎಂ ಆಗಲಿ ಎಂದೇ ಬಯಸುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ನಲ್ಲೂ ಸಿಎಂ ಎಂಬ ವಿಚಾರ ಬೂದಿ ಮುಚ್ಚಿದ ಕೆಂಡದಂತೆಯೇ ಆಡುತ್ತಿದೆ. ಹೀಗಿರುವಾಗ ಬಿಜೆಪಿ ಶಾಸಕರೇ ಸಿಎಂ ಸಿದ್ದರಾಮಯ್ಯ ಅವರಿಗೆ ಬೆಂಬಲ ನೀಡಿದ್ದಾರೆ.

Advertisement
Tags :
bjp mlaCM Siddaramaiahಬಿಜೆಪಿ ಶಾಸಕಮನದಾಳದ ಆಸೆಸಿಎಂ ಆಗಲಿಸಿದ್ದರಾಮಯ್ಯಹತ್ತು ವರ್ಷ
Advertisement
Next Article