Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಮಾಜಿ ಸಿಎಂ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿ ಮಂತ್ರಿ ಆದ್ರಂತೆ ಮುನಿರತ್ನ : ಸಂತ್ರಸ್ತೆ ಹೇಳಿದ್ದೇನು..?

06:05 PM Oct 09, 2024 IST | suddionenews
Advertisement

 

Advertisement

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಶಾಸಕ‌ ಮುನಿರತ್ನ ವಿರುದ್ಧ ಸಂತ್ರಸ್ತೆ ಸ್ಪೋಟಕ ವಿಚಾರ ಬಾಯ್ಬಿಟ್ಟಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿರುವ ಸಂತ್ರಸ್ತೆ, ಮುನಿರತ್ನ ಸಚಿವರಾಗಿದ್ದು ಹೇಗೆ ಎಂಬುದನ್ನು ತಿಳಿಸಿದ್ದಾರೆ.

ಮುನಿರತ್ನ ಅವರು ಮಾಜಿ ಮುಖ್ಯಮಂತ್ರಿಗಳೊಬ್ಬರಿಗೆ ಹನಿಟ್ರ್ಯಾಪ್ ಮಾಡಿಸಿದ್ದಾರೆ. ಮುನಿರತ್ನ ಬಳಿ ಮಾಜಿ ಮುಖ್ಯಮಂತ್ರಿಗಳ ವಿಡಿಯೋ ಇದೆ. ಆ ವಿಡಿಯೋ ತೋರಿಸಿ ಬ್ಲ್ಯಾಕ್ ಮೇಲ್ ಮಾಡಿಯೇ ಮುನಿರತ್ನ ಅವರು ಮಂತ್ರಿ ಸ್ಥಾನ ಪಡೆದುಕೊಂಡಿದ್ದರು. ಅವರ ಕೃತ್ಯಗಳನ್ನು ಸಹಿಸಲಾರದೆ ದೂರು ದಾಖಲಿಸಿದ್ದೇವೆ. 2020ರಲ್ಲಿ ಬಿಜೆಪಿ ಶಾಸಕ ಮುನಿರತ್ನ ಪರಿಚಯವಾಗಿದ್ದಾರೆ. ಮಮತಾ, ವೆಂಕಟೇಶ್ ಎಂಬುವವರ ಮೂಲಕ ಪರಿಚಯವಾಗಿದ್ದರು. ಶಾಸಕ ಮುನಿರತ್ನ ನನಗೆ ವಿಡಿಯೋ ಕರೆ ಕೂಡ ಮಾಡಿದ್ದಾರೆ. ಒಂದು ದಿನ ಗೋದಾಮಿನ ಬಳಿಯೂ ಕರೆದುಕೊಂಡು ಹೋಗಿದ್ದರು. ಅಲ್ಲಿ ನನ್ನನ್ನು ಹೆದರಿಸಿ, ಅತ್ಯಾಚಾರ ಮಾಡಿದ್ದಾರೆ. ಅವರು ಜಾಮೀನು ಪಡೆದು ಹೊರಗೆ ಬಂದರೆ ನನಗೆ ಜೀವ ಭಯವಿದೆ ಎಂದು ಸಂತ್ರಸ್ತೆ ತಿಳಿಸಿದ್ದಾರೆ.

Advertisement

ಮುನಿರತ್ನ ಬಳಿ ಹಲವರ ಖಾಸಗಿ ಅಶ್ಲೀಲ ವಿಡಿಯೋಗಳಿವೆ. ಅದನ್ನು ಇಟ್ಟುಕೊಂಡು ಅವರು ರಾಜಕೀಯ ಎದುರಾಳಿಗಳನ್ನು ಹಣಿಯುತ್ತಿದ್ದಾರೆ. ಒಂದು ದಿನ ನನ್ನನ್ನು ಗೋಡೌನ್ ಬಳಿ ಕರೆದಿದ್ದ ಮುನಿರತ್ನ ನನ್ನನ್ನು ಎರಡನೇ ಮಹಡಿಗೆ ಕರೆದುಕೊಂಡು ಹೋಗಿದ್ದರು. ತಬ್ಬಿಕೊಳ್ಳಲು ಬಂದಿದ್ದರು. ಆಗ ದೂರ ತಳ್ಳಿದ್ದೆ. ನೀವೂ ತಂದೆ ಸಮಾನ ಸರ್ ಬಿಟ್ಟು ಬಿಡಿ ಎಂದು ಹೇಳಿದ್ದೆ. ಆಗ ದಿವಾನ್ ಮೇಲೆ ಕೂರಿಸಿಕೊಂಡು, ನನ್ನನ್ನು ಎಂಎಲ್ಎ ಆಗಿ ನೋಡುತ್ತಿದ್ದೀಯಾ. ನಾನೊಬ್ಬ ಕಾಂಟ್ರಾಕ್ಟರ್ ಎಂದು ಹೇಳಿದ್ದರು. ಅಲ್ಲದೆ ನನ್ನನ್ನು ಹೆದರಿಸಿ ದಿವಾನ್ ಕಾಟ್ ಮೇಲೆಯೇ ಅತ್ಯಾಚಾರ ಮಾಡಿದ್ದರು ಎಂದಿದ್ದಾರೆ.

Advertisement
Tags :
bengaluruchitradurgaMLA Munirathnasuddionesuddione newsಚಿತ್ರದುರ್ಗಬೆಂಗಳೂರುಬ್ಲ್ಯಾಕ್ ಮೇಲ್ಮಾಜಿ ಸಿಎಂವಿಡಿಯೋಶಾಸಕ ಮುನಿರತ್ನಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article