For the best experience, open
https://m.suddione.com
on your mobile browser.
Advertisement

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಪ್ತನ ಕೊಲೆ : ಆರೋಪಿಗಳ ಮೇಲೆ ಫೈರಿಂಗ್

10:59 AM Oct 24, 2023 IST | suddionenews
ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಪ್ತನ ಕೊಲೆ   ಆರೋಪಿಗಳ ಮೇಲೆ ಫೈರಿಂಗ್
Advertisement

Advertisement
Advertisement

ಕೋಲಾರ: ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಎಂ ಶ್ರೀನಿವಾಸ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಕೋಲಾರದ ಹೊರವಲಯದಲ್ಲಿ ನಿನ್ನೆ ಹತ್ಯೆ ಮಾಡಿ ಎಸ್ಕೇಪ್ ಆಗಿದ್ದರು. ಇಂದು ಆರೋಪಿಗಳು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಬಂಧಿಸುವಾಗ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಹೀಗಾಗಿ ಫೈರಿಂಗ್ ಮಾಡಿ, ಆರೋಪಿಗಳನ್ನು ಬಂಧಿಸಿದ್ದಾರೆ. ಕೊಲೆಯ ಆರು ಆರೋಪಿಗಳ ಪೈಕಿ ಈಗ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ.

Advertisement

ಕೊಲೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇದರಲ್ಲಿ ಪ್ರಮುಖ ಆರೋಪಿಯಾಗಿರುವ ವೇಣುಗೋಪಾಲ್ ಹಾಗೂ ಮನೀಂದ್ರ ಕಾಲಿಗೆ ಗುಂಡೇಟು ತಗುಲಿದೆ. ಇನ್ನೊಬ್ಬ ಆರೋಪಿ ಸಂತೋಷ್ ಕಾಲಿಗೂ ಗಾಯವಾಗಿದೆ. ವೇಮಗಲ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ವೆಂಕಟೇಶ್ ಅವರಿಂದ ಫೈರಿಂಗ್ ನಡೆದಿದೆ.

Advertisement
Advertisement

ಮೂವರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿ ಕರೆತರುತ್ತಿದ್ದರು. ಈ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನ ನಡೆಸಿದ್ದಾರೆ. ಹೀಗಾಗಿ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಲಕ್ಷ್ಮೀ ಸಾಗರ ಅರಣ್ಯ ಪ್ರದೇಶದಲ್ಲಿ ಈ ಫೈರಿಂಗ್ ನಡೆದಿದೆ. ಇನ್ಸ್ ಪೆಕ್ಟರ್ ವೆಂಕಟೇಶ್ ಹಾಗೂ ಪೊಲೀಸ್ ಸಿಬ್ಬಂದಿ ನಾಗೇಶ್ ಅವರಿಗೂ ಇದರಿಂದ ಗಾಯವಾಗಿದೆ. ಸದ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement
Tags :
Advertisement