For the best experience, open
https://m.suddione.com
on your mobile browser.
Advertisement

ಬ್ರಿಟಿಷರ ಬೂಟು ನೆಕ್ಕುತ್ತಾರೆ ಹೇಳಿಕೆಗೆ ಆರ್ ಅಶೋಕ್ ಗರಂ : ಬಿಕೆ ಹರಿಪ್ರಸಾದ್ ಗೆ ತಿರುಗೇಟು..!

11:59 AM Dec 25, 2023 IST | suddionenews
ಬ್ರಿಟಿಷರ ಬೂಟು ನೆಕ್ಕುತ್ತಾರೆ ಹೇಳಿಕೆಗೆ ಆರ್ ಅಶೋಕ್ ಗರಂ   ಬಿಕೆ ಹರಿಪ್ರಸಾದ್ ಗೆ ತಿರುಗೇಟು
Advertisement

ಬೆಂಗಳೂರು: ವಿಪಕ್ಷ ನಾಯಕ ಆರ್ ಅಶೋಕ್ ಕಾಂಗ್ರೆಸ್ ಮೇಲೆ ಕಿಡಿಕಾರಿದ್ದಾರೆ. ಇದರ ಜೊತೆಗೆ ಬಿಕೆ ಹರಿಪ್ರಸಾದ್ ಅವರು ಹೇಳಿದ್ದ ಬ್ರಿಟಿಷರ ಬೂಟು ನೆಕ್ಕಿದ್ದವರು ಎಂಬ ಜೇಳಿಕೆಗೂ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಅಭಿವೃದ್ಧಿಗೆ ಪೂರಕವಾಗಿ ನಿಲ್ಲುತ್ತಿಲ್ಲ. ಯಾವ ಯೋಜನೆಗೂ ಅಡಿಗಲ್ಲು ಹಾಕದೆ, ಕೇವಲ ಜನರ ಎದೆ ಮೇಲೆ ಕಲ್ಲು ಹಾಕುತ್ತಿದ್ದಾರೆ ಎಂದಿದ್ದಾರೆ.

Advertisement
Advertisement

Advertisement

ಸಿಎಂ ಸಿದ್ದರಾಮಯ್ಯ ಅವರು ಜಾತಿ - ಧರ್ಮಗಳ ನಡುವೆ ಬೆಂಕಿ ಹಚ್ಚುವ ವೀರನಾಗಿದ್ದಾರೆ. ಬರ ಪರಿಹಾರಕ್ಕೆ ಇದೇ ವಾರದಲ್ಲಿ ಪರಿಹಾರ ಬಿಡುಗಡೆ ಮಾಡಲಾಗುವುದು ಎಂದು ಸರ್ಕಾರ ಹೇಳಿದೆ. ಆದರೆ ಈವರೆಗೂ ಹಣ ಸಿಕ್ಕಿಲ್ಲ. ಸರ್ಕಾರದ ಶೌಚಾಲಯ ಸ್ವಚ್ಛಗೊಳಿಸುವುದಕ್ಕೂ ಹಣ ಇಲ್ಲ. ಸರ್ಕಾರದಿಂದ ಕೊಡುವ 15-20 ಸಾವಿರ ಹಣಕ್ಕೆ ಕೆಲಸ ಮಾಡಲು ಯಾರು ಬರದ ಕಾರಣ, ಅಲ್ಲಿನ ಮಕ್ಕಳನ್ನೇ ಬಳಸಿಕೊಂಡು ಶೌಚಾಲಯ ಸ್ವಚ್ಛಗೊಳಿಸಲಾಗುತ್ತಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ‌.

Advertisement
Advertisement

ಇದೆ ವೇಳೆ ಬಿಕೆ ಹರಿಪ್ರಸಾದ್ ನೀಡಿದ ಬ್ರಿಟಿಷರ ಬೂಟು ನೆಕ್ಕುತ್ತಿದ್ದರು ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಹತಾಶರಾಗಿ ಈ ರೀತಿ ಮಾತನಾಡುತ್ತಿದ್ದಾರೆ.ಅವರ ಹೇಳಿಕೆ, ಅವರ ಮನಸ್ಥಿತಿಯನ್ನು ತೋರಿಸುತ್ತದೆ. ಸಮೀಕ್ಷೆಗಳ ಪ್ರಕಾರ ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗುತ್ತಾರೆ. ಕಾಂಗ್ರೆಸ್ ನಲ್ಲಿ ರಾಹುಲ್ ಗಾಂಧಿ ಬದಲು, ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಮಾಡಿ ಎಂದು ಒಕ್ಕೂಟದ ಸದಸ್ಯರು ಬಯಸಿದ್ದಾರೆ. ಈ ಎಲ್ಲಾ ವಿಷಯಗಳಿಂದ ಹತಾಶರಾಗಿರುವ ಕಾಂಗ್ರೆಸ್ ನಾಯಕರು, ಬೇರೆ ವಿಷಯದ ಬಗ್ಗೆ ಮಾತನಾಡಲು ಶುರು ಮಾಡಿದ್ದಾರೆ ಎಂದಿದ್ದಾರೆ.

Advertisement
Tags :
Advertisement