Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ರೇಣುಕಾಸ್ವಾಮಿ ಕೊಲೆ ಪ್ರಕರಣ : ಉಪೇಂದ್ರ ಏನಂದ್ರು..?

01:44 PM Jun 17, 2024 IST | suddionenews
Advertisement

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅಂಡ್ ಗ್ಯಾಂಗ್ ನ ಒಬ್ಬೊಬ್ಬರೇ ಅರೆಸ್ಟ್ ಆಗುತ್ತಿದ್ದಾರೆ. ಈ ಪ್ರಕರಣ ಸಂಬಂಧ ಸೆಲೆಬ್ರೆಟಿಗಳು ಕೂಡ ಮಾತನಾಡುತ್ತಿದ್ದಾರೆ. ನಿನ್ನೆ ಸುದೀಪ್ ಮಾತನಾಡಿದ್ದರು, ಈಗ ಉಪೇಂದ್ರ ಅವರು ಟ್ವೀಟ್ ಮಾಡಿ, ತನಿಖೆ ಬಗ್ಗೆ ಕೇಳಿದ್ದಾರೆ.

Advertisement

ದರ್ಶನ್ - ರೇಣುಕಾ ಸ್ವಾಮಿ - ಪಾರದರ್ಶಕ ವಿಚಾರಣೆ …..
ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ದರ್ಶನ್ ಬಂಧನ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಮತ್ತು ಅದರ ವಿಚಾರಣೆ ಇಡೀ ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಭೆರಗಾಗಿ ನೋಡುತ್ತಿದೆ.
ಈ ಹೈ ಪ್ರೊಫೈಲ್ ಕೇಸ್ ನ ವಿಚಾರಣೆಯಲ್ಲಿ ನಿಶ್ಪಕ್ಷಪಾತವಾದ ನಿರ್ಣಯ ಮತ್ತು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ. ರೇಣುಕಾ ಸ್ವಾಮಿ ಕುಟುಂಬದಲ್ಲಿ, ಜನರಲ್ಲಿ, ಟೀವಿ ಮಾಧ್ಯಮಗಳಲ್ಲಿ ಮತ್ತು ದರ್ಶನ್ ಅಭಿಮಾನಿಗಳಲ್ಲಿ ಏನೇನೋ ಆತಂಕ, ಅನುಮಾನಗಳು ಕಾಡುತ್ತಿದೆ, ಊಹಾಪೋಹಗಳು ಹುಟ್ಟಿಕೊಳ್ಳುತ್ತಿದೆ. ಏಕೆಂದರೆ……
ಯಾವುದೇ ಕೇಸ್ ಆದರೂ ಆ ಕೇಸ್ ನ ವೀಡಿಯೋ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಆಗಾಗ ಪೋಲೀಸರು ಸಂಬಂಧ ಪಟ್ಟ ವ್ಯಕ್ತಿಗಳ ಕುಟುಂಬದವರ ಜೊತೆ ಹಂಚಿಕೊಳ್ಳಬೇಕು ಮತ್ತು ಅದು ಕಾನೂನಾಗಬೇಕು. ( ಹಿಂದೆಲ್ಲಾ ಪೊಲೀಸರು ವಿಚಾರಣೆಯ ವಿವರ ಬರೆದು ದಾಖಲಿಸುತ್ತಿದ್ದರು ಈಗ ತಂತ್ರಜ್ಞಾನ ಇಷ್ಟೊಂದು ಮುಂದುವರೆದಿದ್ದು ಎಲ್ಲವನ್ನೂ ವೀಡಿಯೋ ರೆಕಾರ್ಡ್ ಮತ್ತು ಲೈವ್ ಸ್ಟ್ರೀಮಿಂಗ್ ಮಾಡಬಹುದು )( ಕಾನೂನು ಸುಧಾರಣೆಗಳು #CriminalJustice Reforms ).

ಅದೇ ರೀತಿ ಒಬ್ಬ ಸಾರ್ವಜನಿಕ ವ್ಯಕ್ತಿಯ ಬಗ್ಗೆ ಕೇಸ್ ಆಗಿದ್ದರೆ ಆ ಕೇಸ್ ನ ವಿಚಾರಣೆಯ ವೀಡಿಯೋ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಪೋಲೀಸರು ಆಗಾಗ ಸಾರ್ವಜನಿಕವಾಗಿ ತೆರೆದಿಡಬೇಕು. ಒಬ್ಬ ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಸಂಪೂರ್ಣ ಪಾರದರ್ಶಕತೆಯಿಂದ ಆಗಬೇಕು, ಸಾಕ್ಷಿ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಇವಕ್ಕೆಲ್ಲಾ ತೆರೆ ಎಳೆದಂತಾಗುತ್ತದೆ.
ಆಗ ರೇಣುಕಾ ಸ್ವಾಮಿ ಕುಟುಂಬಕ್ಕೆ, ಜನರಿಗೆ, ಟೀವಿ ಮಾಧ್ಯಮಗಳಿಗೆ ಮತ್ತು ದರ್ಶನ್ ಅಭಿಮಾನಿಗಳಿಗೆ ಮನಸಿನಲ್ಲಿ ಗೊಂದಲಗಳಿಲ್ಲದೆೇ ಪೋಲೀಸ್ ಮತ್ತು ಟೀವಿ ಮಾಧ್ಯಮಗಳ ಬಗ್ಗೆ ಇನ್ನೂ ಗೌರವ ಹೆಚ್ಚಾಗುತ್ತದೆ ಮತ್ತು ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಬರುತ್ತದೆ ಎಂದಿದ್ದಾರೆ.

Advertisement

Advertisement
Tags :
actor UpendrabengaluruchitradurgaRenuka Swamy murder casesuddionesuddione newsಉಪೇಂದ್ರಚಿತ್ರದುರ್ಗಪ್ರಕರಣಬೆಂಗಳೂರುರೇಣುಕಾಸ್ವಾಮಿ ಕೊಲೆ ಪ್ರಕರಣಸುದೀಪ್ಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article