Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಸೋಮಣ್ಣ ಸಿಎಂ ಆಗ್ತೀನಿ ಎಂಬ ಭ್ರಮೆಯಲ್ಲಿದ್ದರು : ರೇಣುಕಾಚಾರ್ಯ

08:25 PM Dec 14, 2023 IST | suddionenews
Advertisement

ದಾವಣಗೆರೆ: ಬಿಎಸ್ ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರನ್ನು ಯಾರಾದರೂ ಟೀಕಿಸಿದರೆ ಅದನ್ನು ರೇಣುಕಾಚಾರ್ಯ ತಡೆದುಕೊಳ್ಳುವುದಿಲ್ಲ. ಬೇಗನೇ ಪ್ರತಿಕ್ರಿಯೆ ನೀಡಿ ಬಿಡುತ್ತಾರೆ. ಅದರಲ್ಲೂ ಶಾಸಕ ಯತ್ನಾಳ್ ಹಾಗೂ ಸೋಮಣ್ಣ ಅವರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ. ಯಡಿಯೂರಪ್ಪ ಅವರ ವಿರುದ್ಧ ಹಾಗೂ ವಿಜಯೇಂದ್ರ ಅವರ ವಿರುದ್ಧ ಮಾತನಾಡಿದರೆ ಇನ್ಮುಂದೆ ಸುಮ್ಮನೆ ಕೂರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

Advertisement

 

ಬಿ ಎಸ್ ಯಡಿಯೂರಪ್ಪ ವಿರುದ್ಧ ಬೇರೆ ಪಕ್ಷದಿಂದ ಕರೆತಂದ ಯತ್ನಾಳ್ ಹಾಗೂ ಸೋಮಣ್ಣ ಇವರಿಬ್ಬರೇ ಮಾತನಾಡುತ್ತಿರುವುದು. ಬಿಎಸ್ವೈ ವಿರುದ್ಧ ಮಾತನಾಡುವುದಕ್ಕೆ ಯಾವ ನೈತಿಕತೆ ಇದೆ. ಯತ್ನಾಳ್ ಹಾಗೂ ಸೋಮಣ್ಣ ಎಲ್ಲಿಯವರೆಗೂ ಬಿಎಸ್ವೈ ಹಾಗೂ ವಿಜಯೇಂದ್ರ ಅವರ ವಿರುದ್ಧ ಮಾತನಾಡುತ್ತಾರೋ ಅಲ್ಲಿಯವರೆಗೂ ನಾವೂ ಮಾತನಾಡುತ್ತೇವೆ ಎಂದಿದ್ದಾರೆ.

Advertisement

 

ನಮಗೂ ತಾಳ್ಮೆ ಇದೆ. ಇದನ್ನೆಲ್ಲ ಸಹಿಸುವುದಕ್ಕೆ ಆಗುವುದಿಲ್ಲ. ಪ್ರತಿದಿನ ಇಬ್ಬರು ಮಾತನಾಡಿದರೆ ಯಡಿಯೂರಪ್ಪ ಅವರ ತೂಕ ಕಡಿಮೆ ಆಗುತ್ತದಾ..? ಯಡಿಯೂರಪ್ಪ ಅವರು ನಡೆದ ಹಾದಿಯ ಮಣ್ಣು ತೆಗೆದುಕೊಂಡು ಚಾಮರಾಜನಗರ ಹಾಗೂ ಮೈಸೂರು ಜನ ಹಣೆಗೆ ಇಟ್ಟುಕೊಳ್ಳುತ್ತಾರೆ. ಅಷ್ಟು ಹೋರಾಟದಿಂದ ಮೇಲೆ ಬಂದು ಜನರಿಗಾಗಿ ಜೀವ ಮುಡಿಪಿಟ್ಟ ನಾಯಕ ಅವರು. ಯತ್ನಾಳ್ ಹಾಗೂ ಸೋಮಣ್ಣ ಅವರ ಪಾಪದ ಕೊಡ ತುಂಬಿದೆ. ಅದಕ್ಕೆ ಆದಷ್ಟು ಬೇಗ ಅಂತ್ಯ ಕಾಣುತ್ತದೆ. ಅದಕ್ಕೆಂದೆ ಯಡಿಯೂರಪ್ಪ ಅವರನ್ನು ಜನರ ಮುಂದೆ ವಿಲನ್ ಮಾಡಲು ಹೊರಟಿದ್ದಾರೆ. ಟೀಕೆ ಮಾಡುವುದನ್ನು ಕೈಬಿಡಬೇಕು. ನಾವೆಲ್ಲರೂ ವಿಜಯೇಂದ್ರ ಅವರಿಗೆ ಸಾಥ್ ನೀಡುತ್ತೇವೆ. ಸಮಸ್ಯೆಗಳು ಇದ್ದರೆ ಹೈಕಮಾಂಡ್ ಬಳಿ ಹೇಳಿಕೊಳ್ಳಲಿ. ಇನ್ನು ಮುಂದೆಯಾದರೂ ತಿದ್ದಿಕೊಳ್ಳಲಿ ಇಲ್ಲವಾದರೆ ನಾವೂ ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

Advertisement
Tags :
bangaloredavanagereMinister somannaRenukacharyaದಾವಣಗೆರೆಬೆಂಗಳೂರುರೇಣುಕಾಚಾರ್ಯಸೋಮಣ್ಣ
Advertisement
Next Article