Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಶಿವಮೊಗ್ಗದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ..!

04:35 PM Aug 13, 2024 IST | suddionenews
Advertisement

Advertisement

 

 

Advertisement

ಶಿವಮೊಗ್ಗ: ಒಂದೇ ಕುಟುಂಬದಲ್ಲಿ ಮೂವರು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಶಿವಮೊಗ್ಗ ನಗರದ ಕ್ಲಾರ್ಕ್ ಪೇಟೆಯಲ್ಲಿ ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಭುವನೇಶ್ವರಿ, ಮಾರುತಿ ಹಾಗೂ ದರ್ಶನ್ ಮೃತರಾಗಿದ್ದಾರೆ. ಕೌಟುಂಬಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ಯವಾಗಿದೆ.

ಶಿವಮೊಗ್ಗದ ಒಟಿ ರಸ್ತೆಯ ವಿಜಯ ಗ್ಯಾರೇಜ್ ಬಳಿ ಭುವನೇಶ್ವರಿ ಅವರ ಮನೆ ಇದೆ. ಮನೆಯಲ್ಲಿಯೇ ನಿನ್ನೆ ಸೋಮವಾರ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದರೆ ಈ ವಿಚಾರ ಯಾರಿಗೂ ಗೊತ್ತಾಗಿಲ್ಲ. ಮೃತರಿಗೆ ಸಂಬಂಧಿಕರು ಸಾಕಷ್ಟು ಸಲ ಕರೆ ಮಾಡಿದ್ದಾರೆ. ಆದರೂ ಯಾರೂ ಕರೆ ಸ್ವೀಕರಿಸಿಲ್ಲ. ಗಾಬರಿಯಾಗಿ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಭುವನೇಶ್ವರಿ ಅವರ ಜೊತೆಗೆ ಅವರ ತಮ್ಮ ಮಾರುತಿ ಹಾಗೂ ಮಗ ದರ್ಶನ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯ ಮೂವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಶಿವಮೊಗ್ಗದ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Tags :
bengaluruchitradurgacommittedfamilyShimogasuddionesuddione newssuicideಆತ್ಮಹತ್ಯೆಕುಟುಂಬಚಿತ್ರದುರ್ಗಬೆಂಗಳೂರುಶಿವಮೊಗ್ಗಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article