Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಉತ್ತರಾಖಂಡ ಸುರಂಗ ಕುಸಿತ ಪ್ರಕರಣ : ಸಿಕ್ಕಿಬಿದ್ದ ಕಾರ್ಮಿಕರನ್ನು ಹೇಗೆ ರಕ್ಷಿಸುತ್ತಾರೆ ? ವೀಡಿಯೋ ಬಿಡುಗಡೆ ಮಾಡಿದ ಎನ್‌ಡಿಆರ್‌ಎಫ್...!

01:52 PM Nov 24, 2023 IST | suddionenews
Advertisement

 

Advertisement

ಸುದ್ದಿಒನ್ : ಉತ್ತರಾಖಂಡದಲ್ಲಿ ಸುರಂಗ ಕುಸಿತದ ಅವಘಡದಲ್ಲಿ ಸಿಲುಕಿರುವ 41 ಕಾರ್ಮಿಕರು ಅವಶೇಷಗಳಡಿ ಸಿಲುಕಿ ಕಳೆದ 13 ದಿನಗಳಿಂದ ಕಾಲ ಕಳೆಯುತ್ತಿದ್ದಾರೆ.

ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗ ಕುಸಿತದ ಘಟನೆಯಲ್ಲಿ ಸಂತ್ರಸ್ತರನ್ನು ರಕ್ಷಿಸಲು ಪರಿಹಾರ ತಂಡಗಳು ಅವಿರತ ಪ್ರಯತ್ನಗಳನ್ನು ನಡೆಸುತ್ತಿವೆ. ಇನ್ನು ಕೆಲವೇ ಗಂಟೆಗಳಲ್ಲಿ 41 ಮಂದಿಯನ್ನು ಹೊರತರುವ ಸಾಧ್ಯತೆ ಇದೆ. ಅವರಿಗೆ ತಕ್ಷಣದ ವೈದ್ಯಕೀಯ ನೆರವು ನೀಡಲು ಘಟನಾ ಸ್ಥಳದಲ್ಲಿ ಆಂಬ್ಯುಲೆನ್ಸ್, ವಿಶೇಷ ಹಾಸಿಗೆಗಳು, ಔಷಧಗಳು ಮತ್ತು ಆಮ್ಲಜನಕದ ಕಿಟ್‌ಗಳನ್ನು ಒದಗಿಸಲಾಗಿದೆ.

ಸದ್ಯ ಸುರಂಗ ಕುಸಿದಿರುವ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಸುರಂಗದಲ್ಲಿ ಉಳಿದಿರುವ ಕಾರ್ಮಿಕರನ್ನು ಕಲ್ಲುಗಳ ಅವಶೇಷಗಳಿಂದ ಹೊರತರುವ ವಿಧಾನವನ್ನು ಅಧಿಕಾರಿಗಳು ಪ್ರಾಯೋಗಿಕವಾಗಿ ಪರಿಶೀಲಿಸಿದರು.

Advertisement

ಒಳಗೆ ಸಿಲುಕಿರುವ ಕಾರ್ಮಿಕರನ್ನು ಹೊರತೆಗೆಯಲು ಸ್ಟ್ರೆಚರ್‌ಗಳ ಬಳಕೆಯನ್ನು ಪ್ರದರ್ಶಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಇಂದು ವೀಡಿಯೋವನ್ನು ಬಿಡುಗಡೆ ಮಾಡಿದೆ.

ನವೆಂಬರ್ 12ರಂದು ಸುರಂಗದ ಒಂದು ಭಾಗ ಕುಸಿದು ಬಿದ್ದ ಅವಘಡದಲ್ಲಿ 41 ಕಾರ್ಮಿಕರು ಸಿಲುಕಿಕೊಂಡಿದ್ದರು.
ಅಂದಿನಿಂದ, ನಡೆಯುತ್ತಿರುವ ಪರಿಹಾರ ಕಾರ್ಯಗಳು ಸಾಕಷ್ಟು ಅಡೆತಡೆಗಳನ್ನು ಎದುರಿಸುತ್ತಿವೆ. ಕೊರೆಯುವ ಸಂದರ್ಭದಲ್ಲಿ ಬಂಡೆಗಳು ಬೀಳುವಂಥ ಅಂಶಗಳಿಂದ ಕಾರ್ಮಿಕರ ರಕ್ಷಣೆ ದೊಡ್ಡ ಸವಾಲಾಗುತ್ತಿದೆ.

ಸುರಂಗದಲ್ಲಿ ಸಿಕ್ಕಿಬಿದ್ದ ಕಾರ್ಮಿಕರು ಮಂಗಳವಾರ ಮೊದಲ ಬಾರಿಗೆ ಕಾಣಿಸಿಕೊಂಡರು, ಪೈಪ್ ಮೂಲಕ ಅಳವಡಿಸಲಾದ ಕ್ಯಾಮೆರಾ ಅವರ ದೃಶ್ಯಗಳನ್ನು ಸೆರೆಹಿಡಿಯಲಾಯಿತು.

ಎಲ್ಲಾ ಕಾರ್ಮಿಕರು ಸುರಕ್ಷಿತವಾಗಿದ್ದು, ಉಕ್ಕಿನ ಪೈಪ್‌ಗಳ ಮೂಲಕ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರಿಗೆ ಆಹಾರ, ನೀರು, ಔಷಧ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

NDRF, SDRF, BRO, ಮತ್ತು ITBP ಸೇರಿದಂತೆ ಅನೇಕ ಏಜೆನ್ಸಿಗಳು ರಕ್ಷಣಾ ಕಾರ್ಯವನ್ನು ನಿರ್ವಹಿಸುತ್ತಿವೆ.
ಅಂತಾರಾಷ್ಟ್ರೀಯ ಸುರಂಗ ತಜ್ಞ ತಂಡ ಮತ್ತು ರಕ್ಷಣಾ ಸಂಶೋಧನಾ ಸಂಸ್ಥೆ ಡಿಆರ್‌ಡಿಒದ ರೊಬೊಟಿಕ್ಸ್ ತಂಡವೂ ಸ್ಥಳದಲ್ಲಿದೆ.

ನಿರ್ಮಾಣ ಹಂತದಲ್ಲಿರುವ ಸುರಂಗವು ಮಹತ್ವಾಕಾಂಕ್ಷೆಯ ಚಾರ್ ಧಾಮ್ ಯೋಜನೆಯ ಭಾಗವಾಗಿದೆ. ಇದು ಹಿಂದೂ ಯಾತ್ರಾ ಸ್ಥಳಗಳಾದ ಬದರಿನಾಥ್, ಕೇದಾರನಾಥ, ಗಂಗೋತ್ರಿ ಮತ್ತು ಯಮುನೋತ್ರಿಗಳಿಗೆ ಸಂಪರ್ಕವನ್ನು ಹೆಚ್ಚಿಸಲು ರಾಷ್ಟ್ರೀಯ ಮೂಲಸೌಕರ್ಯ ಉಪಕ್ರಮವಾಗಿದೆ.

Advertisement
Tags :
featuredNDRFprotectsuddionetrappedtunnel collapseuttarakashiuttarakhandvideoworkersಉತ್ತರಕಾಶಿಉತ್ತರಾಖಂಡಎನ್‌ಡಿಆರ್‌ಎಫ್ಕಾರ್ಮಿಕರುರಕ್ಷಣಾ ಕಾರ್ಯಾಚರಣೆವೀಡಿಯೋಸುದ್ದಿಒನ್ಸುರಂಗ ಕುಸಿತ ಪ್ರಕರಣ
Advertisement
Next Article