For the best experience, open
https://m.suddione.com
on your mobile browser.
Advertisement

ಯಡಿಯೂರಪ್ಪ ಅವರು ಮರ್ಯಾದೆಗೆ ಹೆದರಿ ದೂರು ನೀಡಿಲ್ಲ ಎನ್ನುತ್ತಿದ್ದಾರೆ : ಬಸನಗೌಡ ಪಾಟೀಲ್ ಯತ್ನಾಳ್

04:01 PM Dec 25, 2023 IST | suddionenews
ಯಡಿಯೂರಪ್ಪ ಅವರು ಮರ್ಯಾದೆಗೆ ಹೆದರಿ ದೂರು ನೀಡಿಲ್ಲ ಎನ್ನುತ್ತಿದ್ದಾರೆ   ಬಸನಗೌಡ ಪಾಟೀಲ್ ಯತ್ನಾಳ್
Advertisement

ವಿಜಯಪುರ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಪುತ್ರರ ಮೇಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗಾಗ ಮಾತಿನ ವಾಗ್ದಾಳಿ ನಡೆಸುತ್ತಲೇ ಇರುತ್ತಾರೆ. ಇಂದು ಕೂಡ ವಾಗ್ದಾಳಿ ನಡೆಸಿದ್ದಾರೆ. ಬಿಎಸ್ ಯಡಿಯೂರಪ್ಪ ನನ್ನ ವಿರುದ್ಧ ದೂರು ನೀಡಿದ್ದರು, ಅವರದ್ದೇನು ನಡೆಯುತ್ತಿಲ್ಲ.‌ ಆದರೆ ಮರ್ಯಾದೆ ಹೋಗಬಾರದು ಎಂಬ ಕಾರಣಕ್ಕೆ ದೂರು ನೀಡಿಲ್ಲ ಎನ್ನುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

Advertisement
Advertisement

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಶಕುನಿ ಇದ್ದ ಹಾಗೆ. ಈ ಹಿಂದೆ ಶೋಭಾ ಕರಂದ್ಲಾಜೆ ರಾಜ್ಯಾಧ್ಯಕ್ಷೆಯಾಗಲಿ ಎಂದಿದ್ದರು. ಬಸನಗೌಡ ಪಾಟೀಲ್ ಯತ್ನಾಳ್ ವಿಪಕ್ಷ ನಾಯಕರಾಗಲೂ ನಮಗೆ ಯಾವುದೇ ಅಭ್ಯಂತರವಿಲ್ಲ ಎಂದಿದ್ದರು. ಈ ಮಾತನ್ನು ವಿಜಯೇಂದ್ರ ಕೂಡ ಹೇಳಿದ್ದರು. ಆದರೆ ಅಷ್ಟರಲ್ಲಾಗಲೇ ಹೈಕಮಾಂಡ್ ಬಳಿ ಎಲ್ಲಾ ಪ್ಯಾಕ್ ಮಾಡಿಕೊಂಡು ಬಂದಿದ್ದರು. ಅವರು ಹೇಳುವುದೆಲ್ಲಾ ಉಲ್ಟಾ ಆಗುತ್ತೆ. ಬಿಎಸ್ ಯಡಿಯೂರಪ್ಪ ನನ್ನ ವಿರುದ್ಧ ದೂರು ನೀಡಿದ್ದಾರೆ. ಆದರೆ ಮರ್ಯಾದೆ ಹೋಗಬಾರದು ಎಂಬ ಕಾರಣಕ್ಕೆ ದೂರು ನೀಡಿಲ್ಲ ಎನ್ನುತ್ತಾರೆ ಎಂದಿದ್ದಾರೆ.

Advertisement

ಇದೇ ವೇಳೆ ಹಿಜಾಬ್ ವಿಚಾರವಾಗಿ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಯತ್ನಾಳ್, ಇದೇ ರೀತಿ ಡ್ರೆಸ್ ಕೋಡ್ ಇರಬೇಕು ಎಂದು, ಈ ಹಿಂದೆ ನಮ್ಮ ಸರ್ಕಾರವಿದ್ದಾಗ ಎಲ್ಲಿಯೂ ಹಸ್ತಕ್ಷೇಪ ಮಾಡಿರಲಿಲ್ಲ. ಇಡೀ ದೇಶದಲ್ಲಿ ಎಲ್ಲಿಯೂ ಈ ವಿಚಾರ ಇಲ್ಲ. ಆದರೆ ಕರ್ನಾಟಕದಲ್ಲಿ ಯಾಕೆ..? ಇದು ಇವರೇ ತೆಗೆದಿರುವುದು. ಈ ವಿಚಾರ ಖಂಡಿತ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಗೆ ಮುಳುವಾಗುತ್ತದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.

Advertisement
Advertisement

Advertisement
Tags :
Advertisement