For the best experience, open
https://m.suddione.com
on your mobile browser.
Advertisement

ಆಗಸ್ಟ್ 05 ರಂದು ಛಲವಾದಿ ಮಹಾಸಭಾ ರಾಜ್ಯಾಧ್ಯಕ್ಷರಾದ ವಾಣಿ ಕೆ ಶಿವರಾಂರವರಿಗೆ ಅಭಿನಂದನಾ ಸಮಾರಂಭ

02:45 PM Aug 01, 2024 IST | suddionenews
ಆಗಸ್ಟ್ 05 ರಂದು ಛಲವಾದಿ ಮಹಾಸಭಾ ರಾಜ್ಯಾಧ್ಯಕ್ಷರಾದ ವಾಣಿ ಕೆ ಶಿವರಾಂರವರಿಗೆ ಅಭಿನಂದನಾ ಸಮಾರಂಭ
Advertisement

ಗುಬ್ಬಿ : ಗುಬ್ಬಿ ತಾಲೂಕು ಛಲವಾದಿ ಮಹಾಸಭಾ ವತಿಯಿಂದ  ಆಗಸ್ಟ್ 05 ರಂದು ರಾಜ್ಯಾಧ್ಯಕ್ಷರಾದ ವಾಣಿ ಕೆ ಶಿವರಾಂರವರಿಗೆ ಹಾಗೂ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರ ಸದಸ್ಯರಾದ ಮೋಹನ್ ಕುಮಾರ್ ದಾಸಪ್ಪ ನವರಿಗೆ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ.

Advertisement
Advertisement

ಸಮಾಜದ ಪಟ್ಟಣ ಪಂಚಾಯಿತಿ ಸದಸ್ಯರುಗಳಿಗೆ, ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರುಗಳಿಗೆ ಸನ್ಮಾನ ಹಾಗೂ ಸದಸ್ಯತ್ವ ಅಭಿಯಾನ ಮತ್ತು 2023- 24ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡ 75ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಪಟ್ಟಣದ ಎಸ್ ಎಂ ಪ್ಯಾಲೆಸ್ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಛಲವಾದಿ ಮಹಾಸಭಾ ತಾಲೂಕು ಅಧ್ಯಕ್ಷ ಈರಣ್ಣ ಟಿ. ತಿಳಿಸಿದರು.

ಉಪಾಧ್ಯಕ್ಷ ಕಿಟ್ಟದಕುಪ್ಪೆ ನಾಗರಾಜ್ ಮಾತನಾಡಿ ಹಿರಿಯ ರಂಗಭೂಮಿ ಕಲಾವಿದ ದಿವಂಗತ ಎನ್. ಜಗನ್ನಾಥ್ ರವರ ವೇದಿಕೆ ವತಿಯಿಂದ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ತಾಲೂಕಿನ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ತಿಳಿಸಿದರು.

Advertisement

ಸಚಿನ್ ಟಿ ಜಿ ಮಾತನಾಡಿ ಛಲವಾದಿ ಸಮುದಾಯದ ಯುವಕರು ಮತ್ತು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷರಾದ ಇರುಕಸಂದ್ರ ಮಂಜುನಾಥ್, ಯುವ ಘಟಕದ ಗೌರವಾಧ್ಯಕ್ಷ ಮಂಜುನಾಥ್, ಯುವ ಘಟಕದ ಅಧ್ಯಕ್ಷ ಮಧು ಎಚ್ ಕೆ, ಗಿರೀಶ್ ತಿಪ್ಪೂರ್, ಭರತ್ ಕಿಟ್ಟದ ಕುಪ್ಪೆ, ಯುವ ಘಟಕ ಸಹ ಕಾರ್ಯದರ್ಶಿ ಸೃಜನ್, ಕಸಬಾ ಹೋಬಳಿ ಘಟಕದ ಅಧ್ಯಕ್ಷ ಮುನಿರಾಜು, ಸದಸ್ಯರಾದ ಚಂದ್ರಪ್ಪ,ಯತೀಶ್, ಇದ್ದರು.

Tags :
Advertisement