Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ತುಮಕೂರು ಜಿಲ್ಲೆ ಏನು ನಿಮ್ಮಪ್ಪನ ಜಹಾಗೀರಾ : ಎಚ್ ಡಿ ಕುಮಾರಸ್ವಾಮಿ ಹಿಂಗ್ಯಾಕೆ ಟ್ವೀಟ್ ಮಾಡಿದ್ರು..?

05:15 PM Jan 22, 2022 IST | suddionenews
Advertisement

 

Advertisement

ಬೆಂಗಳೂರು: ಮಾಜಿ ಸಿಎಂ ಗಳ ಟ್ವಿಟ್ಟರ್ ಗುದ್ದಾಟ ಆಗಾಗ ನಡೆಯುತ್ತಲೆ ಇರುತ್ತೆ. ಮಾಜಿ ಸಿಎಂ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಗೆ ಮಾಜಿ ಸಿಎಂ ಕುಮಾರಸ್ವಾಮಿ ಅಷ್ಟೇ ಖಾರವಾಗಿ ತಿರುಗೇಟು ನೀಡಿದ್ದಾರೆ.

ತುಮಕೂರಿನಿಂದ ಮೊದಲು ಜೆಡಿಎಸ್ ಅನ್ನು ಓಡಿಸಿ. ಯಾಕಂದ್ರೆ ಅದು ಬಿಜೆಪಿಯ ಭ್ರಷ್ಟಾಚಾರಕ್ಕೆ ಬಾಲಂಗೋಚಿಯಾಗಿದೆ ಎಂದಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ತುಮಕೂರಿನಿಂದ ಜೆಡಿಎಸ್‌ʼನ್ನು ಓಡಿಸಿ ಅನ್ನುವುದಕ್ಕೆ ತುಮಕೂರು ಜಿಲ್ಲೆಯೇನು ನಿಮ್ಮಪ್ಪನ ಜಹಗೀರಾ? ಅಥವಾ ಕಾಂಗ್ರೆಸ್‌ʼನ ಪಿತ್ರಾರ್ಜಿತ ಆಸ್ತಿಯಾ? ಚಾಮುಂಡೇಶ್ವರಿ ಕ್ಷೇತ್ರದಿಂದ ನಿಮ್ಮನ್ನು ಜನರು ಓಡಿಸಿದ್ದು ಮರೆತುಬಿಟ್ಟಿರಾ? ಈ ಸಲ ಬಾದಾಮಿ ಕ್ಷೇತ್ರದಿಂದಲೂ ಓಡಬೇಕಾಗುತ್ತದೆ, ಕಾಯಿರಿ.

Advertisement

ಒಬ್ಬ ನಾಯಕನನ್ನು ಸೃಷ್ಟಿ ಮಾಡುವ ಯೋಗ್ಯತೆ ಇಲ್ಲ. ಪಕ್ಷ ಕಟ್ಟುವ ಧಂ ಇಲ್ಲ. ಗೆದ್ದಲು ಕಟ್ಟಿದ ಹುತ್ತದಲ್ಲಿ ವಿಷಸರ್ಪದಂತೆ ಹೋಗಿ ಸೇರಿಕೊಳ್ಳುವ, ಕಂಡೋರ ಕಷ್ಟದ ಮೇಲೆ ಅಧಿಕಾರ ಅನುಭವಿಸುವ ಸಿದ್ದರಾಮಯ್ಯ.. ನೀವಾ ಜೆಡಿಎಸ್‌ ಬಗ್ಗೆ ಮಾತನಾಡುವುದು?.

ಕಾಂಗ್ರೆಸ್‌ ಸೇರುವ ಮುನ್ನ ನೀವು ಯಾರ ಬಾಲಂಗೋಚಿ ಆಗಿದ್ದಿರಿ? ಗುರುಸ್ವಾಮಿ ಅವರೆದುರು ಸೋತುಸುಣ್ಣವಾದ ಮೇಲೆ ಅನುಗ್ರಹಕ್ಕೆ ಬಂದು ಯಾರ ಮುಂದೆ ಗಳಗಳನೆ ಅತ್ತು ರಾಜಕೀಯ ಬಿಟ್ಟು, ವಕೀಲಿ ಮಾಡುತ್ತೇನೆ ಎಂದಿರಿ ಅನ್ನುವುದು ನೆನಪಿದೆಯಾ ಸಿದ್ದರಾಮಯ್ಯ? ಆಗ ನಿಮಗೆ ಬಾಲಂಗೋಚಿತನ ನೆನಪಾಗಲಿಲ್ಲವೆ?.

ಪ್ರತಿಯೊಂದಕ್ಕೂ ಈ ಸರಕಾರಕ್ಕೆ ಜೆಡಿಎಸ್‌ ಬೆಂಬಲ ನೀಡುತ್ತಿದೆ ಎನ್ನುವ ನಿಮ್ಮ ʼಸುಳ್ಳು ನಾಲಗೆʼ; ಅದೇ ಸರಕಾರ ಬರಲು ಮೂಲ ಕಾರಣರಾದ ʼಸಿದ್ದಪುರುಷʼ ಯಾರು ಎನ್ನುವುದನ್ನು ಹೇಳಲಿಲ್ಲವೇ? ಪಕ್ಷದ್ರೋಹ ತಾಯಿಗೆ ಮಾಡುವ ದ್ರೋಹಕ್ಕೆ ಸಮಾನ. ನಿಮ್ಮ ದ್ರೋಹ ಮುಚ್ಚಿಟ್ಟುಕೊಳ್ಳಲು ಜೆಡಿಎಸ್‌ ಜಪವಾ ಸಿದ್ದರಾಮಯ್ಯ?.

ಪ್ರತಿಯೊಂದಕ್ಕೂ ಈ ಸರಕಾರಕ್ಕೆ ಜೆಡಿಎಸ್‌ ಬೆಂಬಲ ನೀಡುತ್ತಿದೆ ಎನ್ನುವ ನಿಮ್ಮ ʼಸುಳ್ಳು ನಾಲಗೆʼ; ಅದೇ ಸರಕಾರ ಬರಲು ಮೂಲ ಕಾರಣರಾದ ʼಸಿದ್ದಪುರುಷʼ ಯಾರು ಎನ್ನುವುದನ್ನು ಹೇಳಲಿಲ್ಲವೇ? ಪಕ್ಷದ್ರೋಹ ತಾಯಿಗೆ ಮಾಡುವ ದ್ರೋಹಕ್ಕೆ ಸಮಾನ. ನಿಮ್ಮ ದ್ರೋಹ ಮುಚ್ಚಿಟ್ಟುಕೊಳ್ಳಲು ಜೆಡಿಎಸ್‌ ಜಪವಾ ಸಿದ್ದರಾಮಯ್ಯ?.

ಪ್ರತಿಯೊಂದಕ್ಕೂ ಈ ಸರಕಾರಕ್ಕೆ ಜೆಡಿಎಸ್‌ ಬೆಂಬಲ ನೀಡುತ್ತಿದೆ ಎನ್ನುವ ನಿಮ್ಮ ʼಸುಳ್ಳು ನಾಲಗೆʼ; ಅದೇ ಸರಕಾರ ಬರಲು ಮೂಲ ಕಾರಣರಾದ ʼಸಿದ್ದಪುರುಷʼ ಯಾರು ಎನ್ನುವುದನ್ನು ಹೇಳಲಿಲ್ಲವೇ? ಪಕ್ಷದ್ರೋಹ ತಾಯಿಗೆ ಮಾಡುವ ದ್ರೋಹಕ್ಕೆ ಸಮಾನ. ನಿಮ್ಮ ದ್ರೋಹ ಮುಚ್ಚಿಟ್ಟುಕೊಳ್ಳಲು ಜೆಡಿಎಸ್‌ ಜಪವಾ ಸಿದ್ದರಾಮಯ್ಯ?.

ಸುಳ್ಳು ನಿಮ್ಮ ರಾಜಕೀಯದ ಅಡಿಪಾಯ. ಸುಳ್ಳೇ ನಿಮ್ಮ ರಾಜಕೀಯ ಅಸ್ತಿತ್ವದ ಪ್ರತೀಕ. ಸುಳ್ಳು ಸುಳ್ಳೇ ನಿಮ್ಮ ನರಿಬುದ್ಧಿ ಅವಕಾಶವಾದಿ ರಾಜಕಾರಣ ನಿಜಸ್ವರೂಪ ಎಂದು ಟ್ವೀಟ್ ಮಾಡಿದ್ದಾರೆ.

Advertisement
Tags :
featuredhd‌ kumaraswamySiddaramaiahasuddionetumakuruಎಚ್ ಡಿ ಕುಮಾರಸ್ವಾಮಿಜಹಾಗೀರಾಟ್ವೀಟ್ತುಮಕೂರುಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಸುದ್ದಿಒನ್
Advertisement
Next Article