For the best experience, open
https://m.suddione.com
on your mobile browser.
Advertisement

ರಾಷ್ಟ್ರೀಯ ಮಾನವ ಹಕ್ಕುಗಳ ತನಿಖಾ ಸಮಿತಿ ತಾಲೂಕು ಅಧ್ಯಕ್ಷರಾಗಿ ಮಂಚಲದೊರೆ ರಮೇಶ್ ಆಯ್ಕೆ

09:24 PM Sep 22, 2024 IST | suddionenews
ರಾಷ್ಟ್ರೀಯ ಮಾನವ ಹಕ್ಕುಗಳ ತನಿಖಾ ಸಮಿತಿ ತಾಲೂಕು ಅಧ್ಯಕ್ಷರಾಗಿ ಮಂಚಲದೊರೆ ರಮೇಶ್ ಆಯ್ಕೆ
Advertisement

Advertisement
Advertisement

ಗುಬ್ಬಿ: ಭ್ರಷ್ಟಾಚಾರ ರಹಿತ ಸಮಾಜ ನಿರ್ಮಾಣಕ್ಕಾಗಿ ರಾಷ್ಟ್ರೀಯ ಮಾನವ ಹಕ್ಕುಗಳ ತನಿಖಾ ಸಮಿತಿ ಸ್ಥಾಪಿತವಾಗಿದ್ದು. ಜಿಲ್ಲೆಯ ಯಾವುದೇ ಭಾಗದಲಾಗಲಿ ಜನರಿಗೆ ತೊಂದರೆ ಆದರೆ ಕೂಡಲೇ ಸಮಿತಿ ವತಿಯಿಂದ ದಮನಿತರಿಗೆ ನ್ಯಾಯ ದೊರಕಿಸಿಕೊಡಲಾಗುವುದು ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ತನಿಖಾ ಸಮಿತಿ ಜಿಲ್ಲಾಧ್ಯಕ್ಷ ಶೇಕ್ ಅನ್ಸರ್ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಹಾಗೂ ಜನರ ಜಾಗೃತಿ ಸಭೆ ಕುರಿತು ಮಾತನಾಡಿ ಸಾಮಾಜಿಕ ಪಿಡುಗುಗಳಿಂದ ಜನರನ್ನು ರಕ್ಷಿಸುವ ಉತ್ತಮ ಸಮಿತಿಯಾಗಿದೆ ಎಂದರು.

Advertisement

ಕಾನೂನು ಸಲಹೆಗಾರ ಚೇಳೂರು ಪ್ರವೀಣ್ ಗೌಡ ಮಾತನಾಡಿ ಮಾನವ ಹಕ್ಕುಗಳ ಉಲ್ಲಂಘನೆಯನ್ನು ತಡೆದು. ಬಾಲಕಾರ್ಮಿಕ ಪದ್ಧತಿ, ಬಾಲ್ಯ ವಿವಾಹ ಸೇರಿದಂತೆ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯದ ವಿರುದ್ಧ ನಿರಂತರವಾಗಿ ಹೋರಾಡುವ ಮೂಲಕ ಶಾಲಾ ಕಾಲೇಜುಗಳಲ್ಲಿ, ಗ್ರಾಮಗಳಲ್ಲಿ ಜನರಿಗೆ ಜಾಗೃತಿ ಮೂಡಿಸಿ ಸಮ ಸಮಾಜ ನಿರ್ಮಾಣ ಮಾಡುವ ಉದ್ದೇಶಗಳನ್ನು ಸಮಿತಿ ಒಳಗೊಂಡಿದೆ ಎಂದು ತಿಳಿಸಿದರು.

Advertisement

ತಾಲೂಕು ಅಧ್ಯಕ್ಷ ಮಂಚಲ ದೊರೆ ರಮೇಶ್ ಮಾತನಾಡಿ ನನ್ನನ್ನು ಗುರುತಿಸಿ ತಾಲೂಕ್ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ರಾಜ್ಯಾಧ್ಯಕ್ಷ ಸಂತೋಷ್ ರವರಿಗೆ ಹಾಗೂ ಜಿಲ್ಲಾ ಮಟ್ಟದ ಎಲ್ಲ ಪದಾಧಿಕಾರಿಗಳಿಗೆ ಅಭಿನಂದನೆ ತಿಳಿಸುತ್ತೇನೆ. ಸಮಿತಿ ವತಿಯಿಂದ ಆರೋಗ್ಯ ಶಿಬಿರ, ಮಕ್ಕಳಗೆ ಕಾನೂನಿನ ಅರಿವು ಮುಂತಾದ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಸಭೆಯಲ್ಲಿ ಗೌರವಾಧ್ಯಕ್ಷ ಹನುಮಂತರಾಯಪ್ಪ, ಕಾರ್ಯದರ್ಶಿ ಶೇಕ್ ಮಹಮ್ಮದ್, ಮಹಿಳಾ ಘಟಕದ ಸಾನಿಯ ಕೌಸರ್, ಮಂಜುಳ ಎಂ, ಅಂಜಲ, ವಿಕಾಸ್ ಮುಂತಾದವರಿದ್ದರು.

Tags :
Advertisement