Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಅಮೃತಸರೋವರ ಯೋಜನೆಯ ಕಾಮಗಾರಿ ಕಳಪೆ ಎಂದು ಜನರ ಆಕ್ರೋಶ

03:56 PM Aug 30, 2024 IST | suddionenews
Advertisement

 

Advertisement

ಗುಬ್ಬಿ : ಅಮೃತ ಸರೋವರ ಯೋಜನೆ ಕಾಮಗಾರಿ ಕಳಪೆ ಮಾಡಲಾಗುತ್ತಿದೆ ಎಂದು ಕಿಟ್ಟದಕುಪ್ಪೆ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕಿನ ಕಿಟ್ಟಿದಕುಪ್ಪೆ ಗ್ರಾಮದಲ್ಲಿ ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಮೃತ ಸರೋವರ ಯೋಜನೆಯಲ್ಲಿ ಕಾಮಗಾರಿ ನಡೆಸುತ್ತಿದ್ದು.ಗುಣಮಟ್ಟದ ಸಾಮಗ್ರಿಗಳನ್ನು ಬಳಸದೆ ಕಳಪೆ ಕಾಮಗಾರಿ ನಡೆಸುತ್ತಿದ್ದು.ಇಂಜಿನಿಯರ್ ಗಳು ಕೇವಲ ಬಿಲ್ ಮಾಡಿಕೊಳ್ಳುವುದಕ್ಕಾಗಿ ಕಾಮಗಾರಿಗಳನ್ನು ಬಳಸುತ್ತಿದ್ದಾರೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದರು.

Advertisement

ಗ್ರಾಮಸ್ಥ ನಟರಾಜು ಗೌಡ ಮಾತನಾಡಿ ಕಿಟ್ಟದ ಕುಪ್ಪೆ ಗ್ರಾಮದ ಕೆರೆ ಕಾಮಗಾರಿ ಪ್ರಾರಂಭದ ಹಂತದಲ್ಲೇ ನೀರು ಜಿನುಗಿ ಕುಸಿದು ಏರಿ ಒಡೆದು ಹೋಗುವ ಅಂಚಿನಲ್ಲಿದೆ.
ಕೆರೆಯ ಏರಿಗೆ ಬಳಪದ ಕಲ್ಲು ಉಪಯೋಗಿಸಿ ಕಳಪೆ ಕಾಮಗಾರಿ ಮಾಡಿದ್ದಾರೆ. ಅಧಿಕಾರಿಗಳು ಇದಕ್ಕೆ ಸಾಮಿಲ್ ಹಾಗಿ ಬಿಲ್ ಪಾಸ್ ಮಾಡಿಸಿಕೊಂಡಿದ್ದಾರೆ. ಈಗ ಕೆರೆ ಏರಿಯ ಕೆಳಬಾಗದಲ್ಲಿ ರಂದ್ರವಾಗಿ ನೀರು ಜಿನುಗುತ್ತಿದ್ದು ಏರಿ ಒಡೆದು ಹೋಗುವ ಅಂಚಿನಲ್ಲಿದೆ ಎಂದು ತಿಳಿಸಿದರು.

ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಬಾಲಾಜಿ ಮಾತನಾಡಿ ಕೆರೆಯ ದಡದಲ್ಲಿ ಇದ್ದ ತೂಬು ಕಿತ್ತು ನೀರು ಪೋಲಾಗುತ್ತಿದೆ . ಬೆಳಗಿನ ಜಾವ ಏರಿ ಕುಸಿಯುವ ಮಟ್ಟದಲ್ಲಿತ್ತು. ಅಧಿಕಾರಿಗಳನ್ನು ಸಂಪರ್ಕಿಸಿದರೆ ಫೋನಿಗೆ ಸಿಗುತ್ತಿಲ್ಲ. ಕೆರೆಯ ಆಜು ಬಾಜು ಅಡಿಕೆ ತೋಟಗಳಿದ್ದು ನೀರು ತುಂಬಿಕೊಂಡು ರೈತರು ಸಂಕಷ್ಟಕ್ಕೆ ಸಿಲುಕುವ ಮುನ್ನ ಎಚ್ಚೆತ್ತು ಗುಣಮಟ್ಟದ ಕಾಮಗಾರಿಯನ್ನು ಮಾಡಬೇಕೆಂದು ತಿಳಿಸಿದರು.

Advertisement
Tags :
Amritsar projectbengaluruchitradurgaoutragepeoplepoorsuddionesuddione newsಅಮೃತಸರೋವರ ಯೋಜನೆಆಕ್ರೋಶಕಳಪೆಕಾಮಗಾರಿಚಿತ್ರದುರ್ಗಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article